Vijayanagara Express

Kannada News Portal

ಛಲವಾದಿ ಮಹಾಸಭಾದ ಜಿಲ್ಲಾ ಮಟ್ಟದ ಕಾರ್ಯಕಾರಿಣಿ ಸಭೆ

1 min read

 

ಛಲವಾದಿ ಮಹಾಸಭಾದ ಜಿಲ್ಲಾ ಮಟ್ಟದ ಕಾರ್ಯಕಾರಿಣಿ ಸಭೆ

ಹರಪನಹಳ್ಳಿ : ಏ- 3 ತಾಲೂಕಿನಲ್ಲಿ ವಿಜಯನಗರ ಜಿಲ್ಲಾ ಛಲವಾದಿ ಮಹಾಸಭಾದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ನಡೆಸಲಾಯಿತು
ವಿಜಯನಗರ ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷರಾದ ಸೋಮಶೇಖರ್ ಬಣ್ಣದಮನೆ ಇವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಯಿತು ಜಿಲ್ಲೆಯ ಚಲವಾದಿ ಸಮಾಜದ ಬಂಧುಗಳಿಗೆ ಮುಂದಿನ ಕಾರ್ಯಕ್ರಮಗಳ ಬಗ್ಗೆ ರೂಪರೇಷೆಗಳ ಬಗ್ಗೆ ಎಲ್ಲ ತಾಲೂಕಿನಲ್ಲಿ ಸಮಾಜವನ್ನು ಸಂಘಟಿಸುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ವಿಜಯನಗರ ಜಿಲ್ಲೆಯ ಆರು ತಾಲೂಕುಗಳಲ್ಲಿ ಮಹಿಳಾ ಸಂಘಟನೆ, ವಿದ್ಯಾರ್ಥಿ ಸಂಘಟನೆ ಸಾಂಸ್ಕೃತಿಕ ವೇದಿಕೆ ಪ್ರತಿಭಾ ಪುರಸ್ಕಾರ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಸಮಾಜದ ಸಂಘಟನೆ ಅಂಬೇಡ್ಕರ್ ಜಯಂತಿಯ ಬಗ್ಗೆ ಜಿಲ್ಲಾ ಸಮಿತಿಯ ಸಮಾವೇಶ ಇನ್ನೂ ಅನೇಕ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಹರಪನಹಳ್ಳಿ ತಾಲೂಕಿನ ಹಾಗೂ ವಿಜಯನಗರ ಜಿಲ್ಲೆಯ ವಿವಿಧ ತಾಲೂಕಿನ ಎಲ್ಲ ಚಲವಾದಿ ಮಹಾಸಭಾದ ಬಂಧುಗಳು ಭಾಗವಹಿಸಿ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿ ಗೊಳಿಸಲಾಯಿತು ಎಂದು ಸಿ ಪರಶುರಾಮ್ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಲವಾದಿ ಮಹಾಸಭಾ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಆರು ತಾಲೂಕಿನ ಚಲವಾದಿ ಮಹಾಸಭಾ ತಾಲೂಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು ಹಿರಿಯ ಸ್ಥಾಯಿ ಸಮಿತಿಯ ಸದಸ್ಯರುಗಳಾದ ಉಮೇಶ್ ಕೂಡ್ಲಿಗಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ , ಹೊಸಪೇಟೆ ತಾಲೂಕು ಅಧ್ಯಕ್ಷ ಸಣ್ಣ ಈರಣ್ಣ ,ಅಂಜಿನಪ್ಪ ಕೊಟ್ಟೂರು, ಕಾಳಿ ಬಸವರಾಜ್ ಹಗರಿಬೊಮ್ಮನಹಳ್ಳಿ , ದ್ಯಾಮಪ್ಪ ಹೂವಿನಹಡಗಲಿ, ಗುಂಡಗತ್ತಿ ಕೊಟ್ರಪ್ಪ, ಸಿ ಬಸವರಾಜ್, ಪ್ರತಾಪ್ , ಪ್ರಭಾಕರ್ ,ಶಿಕ್ಷಕರಾದ ಸಿ ಗಂಗಾಧರ್, ಸಿ ಮಲ್ಲಿಕಾರ್ಜುನ್, ತಿಪ್ಪೇಸ್ವಾಮಿ, ಬಾಗಳಿ ಕೊಟ್ರೇಶ್ ಮುಂತಾದವರು ಉಪಸ್ಥಿತರಿದ್ದರು.

 

 

 

Leave a Reply

Your email address will not be published. Required fields are marked *