ಬಕ್ರೀದ್ ಹಬ್ಬದ ಪ್ರಯುಕ್ತ ನಾಳೆ ಶಾಂತಿಸಭೆ
1 min readಬಕ್ರೀದ್ ಹಬ್ಬದ ಪ್ರಯುಕ್ತ ನಾಳೆ ಶಾಂತಿಸಭೆ
ಹರಪನಹಳ್ಳಿ: ಜೂ -26 , ಪಟ್ಟಣದ ಪೋಲಿಸ್ ಠಾಣೆಯ ಆವರಣದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ನಾಳೆ ಸೋಮವಾರ ಬೆಳಗ್ಗೆ 10.30 ಕ್ಕೆ ಶಾಂತಿಸಭೆ ನಡೆಸಲಾಗುವುದು ಎಂದು ಡಿವೈಎಸ್ಪಿ ಹಾಲಮೂರ್ತಿರಾವ್ ಹಾಗೂ ವೃತ್ತ ನಿರೀಕ್ಷಕ ನಾಗರಾಜ್ ಕಮ್ಮಾರ , ಪಿಎಸ್ ಐ ಶಾಂತಮೂರ್ತಿರವರು ತಿಳಿಸಿದ್ದಾರೆ.
ಇದೇ ತಿಂಗಳ 29 ನೇ ತಾರೀಖಿನಂದು ಆಚರಿಸುವ ಬಕ್ರೀದ್ ಹಬ್ಬದ ಆಚರಣೆ ವೇಳೆ ಯಾವುದೇ ರೀತಿಯ ತೊಂದರೆಗಳು ನಡೆಯದಂತೆ ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಚರ್ಚಿಸುವುದಕ್ಕಾಗಿ ಶಾಂತಿ ಸಭೆಯನ್ನು ಕರೆಯಲಾಗಿದೆ ಆದುದರಿಂದ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು, ವಿವಿಧ ಸಮಾಜದ ಮುಖಂಡರು, ಹಾಗೂ ಸಂಘ ಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು ಪತ್ರಕರ್ತರು ಭಾಗವಹಿಸುವ ಮೂಲಕ ಸಭೆಯನ್ನು ಯಶಸ್ವಿಗೊಳಿಸಲು ಡಿವೈಎಸ್ಪಿ ಹಾಲಮೂರ್ತಿರಾವ್ ಹಾಗೂ ವೃತ್ತ ನಿರೀಕ್ಷಕ ನಾಗರಾಜ್ ಕಮ್ಮಾರ , ಪಿಎಸ್ ಐ ಶಾಂತಮೂರ್ತಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.